ಬ್ರೇಕಿಂಗ್ ನ್ಯೂಸ್
21-09-24 11:17 pm HK News Desk ಕರ್ನಾಟಕ
ಬೆಳಗಾವಿ, ಸೆ.21: ಪ್ಯಾಲೆಸ್ತೀನ್ ಧ್ವಜದ ಹಾರಾಟದ ಬಗ್ಗೆ ಸಚಿವ ಜಮೀರ್ ಅಹ್ಮದ್ ಸಮರ್ಥನೆ ಮಾಡಿಕೊಂಡ ಬೆನ್ನಲ್ಲೇ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಕಾಣಿಸಿಕೊಂಡಿದೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಉದ್ದಕ್ಕೂ ಪ್ಯಾಲೆಸ್ತೀನ್ ಪರ ಪೋಸ್ಟರ್ ಹಾಕಲಾಗಿದೆ.
ಪೊಲೀಸರ ಎಚ್ಚರಿಕೆಗೆ ಬೆಳಗಾವಿಯಲ್ಲಿ ಪ್ಯಾಲೆಸ್ತೀನ್ ಪ್ರಿಯರು ಡೋಂಟ್ ಕೇರ್ ಮಾಡಿದ್ದಾರೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡನೂರು ಮೀಟರ್ ನಷ್ಟು ರಸ್ತೆಯುದ್ದಕ್ಕೂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಇರುವ ಶಾಮಿಯಾನ ಕಟ್ಟಿದ್ದಾರೆ.
ಈ ಭಾಗದಲ್ಲಿ ಭಾನುವಾರ ಸೆ.22ರಂದು ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು ಇದಕ್ಕಾಗಿ ಪೋಸ್ಟರ್ ಹಾಕಿ ಶೃಂಗಾರ ಮಾಡಲಾಗಿದೆ. ಮುಸ್ಲಿಂ ಸಮುದಾಯದ ಯುವಕರು ರಾತ್ರೋರಾತ್ರಿ ಪ್ಯಾಲೆಸ್ತೀನ್ ಧ್ವಜವನ್ನು ದೊಡ್ಡ ಪ್ರಮಾಣದಲ್ಲಿ ಕಟ್ಟಿದ್ದಾರೆ. ಬೆಳಗಾವಿ ಪಾಲಿಕೆ ವಿರೋಧ ಪಕ್ಷದ ನಾಯಕ ಮುಜಾಮಿಲ್ ಡೋಣಿ ನೇತೃತ್ವದಲ್ಲೇ ಪೋಸ್ಟರ್ ಹಾಕಿರುವುದು ಕಂಡುಬಂದಿದೆ.
ಇದೇ ವೇಳೆ, ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಧ್ವಜ ಕಾಣಿಸಿಕೊಂಡಿದೆ. ಪ್ಯಾಲೆಸ್ಟೈನ್ ಧ್ವಜ ಹಾರಿಸಿ ಯುವಕರು ಮತ್ತೆ ಪುಂಡಾಟ ಮೆರೆದಿದ್ದಾರೆ. ಸುಮಾರು 6 ಅಡಿ ಎತ್ತರದ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದಲ್ಲದೆ, ಕೈಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಈದ್ ಮೆರವಣಿಗೆ ಶನಿವಾರ ನಡೆದಿದೆ. ಈ ವೇಳೆ ಯುವಕರು ಧ್ವಜ ಹಿಡಿದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
The controversy surrounding the Palestinian flag, which has caused a stir in several parts of the state, has now reached Belagavi. On Saturday, September 21, an incident occurred where a pandal resembling the Palestinian flag was erected.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm