ಬ್ರೇಕಿಂಗ್ ನ್ಯೂಸ್
23-09-24 07:46 pm HK News Desk ಕರ್ನಾಟಕ
ರಾಮನಗರ, ಸೆ 23: ಮಧ್ಯರಾತ್ರಿ ಇಬ್ಬರು ಯುವತಿಯರನ್ನು ಅಪಾರ್ಟ್ಮೆಂಟ್ಗೆ ಕರೆತಂದಿದ್ದನ್ನು ಪ್ರಶ್ನಿಸಿದ ಭದ್ರತಾ ಸಿಬ್ಬಂದಿಗೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ, ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ವರ್ತ್ ಅಪಾರ್ಟ್ಮೆಂಟ್ನಲ್ಲಿ ಇತ್ತೀಚೆಗೆ ನಡೆದಿದೆ.
ವರುಣ್ ಹಲ್ಲೆ ಮಾಡಿದ ಯುವಕ. ಪುನೀತ್ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ. ಘಟನೆಗೆ ಸಂಬಂಧಿಸಿದಂತೆ, ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್.ಸಿ ಮಾಡಿಕೊಳ್ಳಲಾಗಿದೆ.
ವಕೀಲಿಕೆ ವೃತ್ತಿ ಪ್ರಾಕ್ಟೀಸ್ ಮಾಡುತ್ತಿರುವ ವರುಣ್, ಸೆ. 19ರಂ ತನ್ನ ಸ್ನೇಹಿತನೊಂದಿಗೆ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್ಗೆ ಇಬ್ಬರು ಯುವತಿಯರನ್ನು ರಾತ್ರಿ 12ರ ಸುಮಾರಿಗೆ ಕರೆ ತಂದಿದ್ದ. ಆಗ ಕರ್ತವ್ಯದಲ್ಲಿದ್ದ ಪುನೀತ್ ಅವರು, 12ರ ನಂತರ ಅಪರಿಚಿತರಿಗೆ ಅಪಾರ್ಟ್ಮೆಂಟ್ಗೆ ಪ್ರವೇಶವಿಲ್ಲ ಎಂಬ ನಿಯಮವಿದೆ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ವರುಣ್, ಪುನೀತ್ ಅವರ ಕೆನ್ನೆ ಮತ್ತು ತಲೆಗೆ ಹೊಡೆದಿದ್ದಾನೆ.
‘ನಾನ್ಯಾರು ಗೊತ್ತಾ? ಡಿಸಿಪಿ ಮಗ ಕಣಲೇ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ, ನಾಳೆ ಬೆಳಿಗ್ಗೆ ನೀನು ಇಲ್ಲಿ ಕೆಲಸಕ್ಕೆ ಇರ್ತಿಯಾ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿಸುತ್ತಾ ವರುಣ್ ಹಲ್ಲೆ ನಡೆಸುತ್ತಿರುವ ವಿಡಿಯೊವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದಿದ್ದಾರೆ. ಅಲ್ಲದೆ, ಆತ ಅಪಾರ್ಟ್ಮೆಂಟ್ ಒಳಕ್ಕೆ ಯುವತಿಯರನ್ನು ಕರೆದೊಯ್ದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿವೆ.
ಹಲ್ಲೆಯಿಂದಾಗಿ ಕಿವಿಗೆ ಗಾಯವಾಗಿದ್ದು, ಸರಿಯಾಗಿ ಕೇಳಿಸುತ್ತಿಲ್ಲ ಎಂದು ಪುನೀತ್ ಅವರು ನೀಡಿದ ದೂರಿನ ಮೇರೆಗೆ ಎನ್.ಸಿ ಮಾಡಿಕೊಳ್ಳಲಾಗಿದೆ. ಆರೋಪಿ ವರುಣ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#bengaluru ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ: ಸಿಎಂ ಸಂಬಂಧಿ ಎಂದು ಧಮ್ಕಿ; ಯುವಕ ಬಂಧನ #Siddaramaiah #kumbalagodu @XpressBengaluru @BlrCityPolice
— kannadaprabha (@KannadaPrabha) September 21, 2024
ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು… pic.twitter.com/vHKd2xATiO
Bangalore cops file case as youth assaults guard, claims to be son of police DCP, CM relative. Karnataka police have slapped a case on a 21-year-old youth for assaulting a security guard of an apartment building for refusing entry to his friends in Bengaluru. Arrested youth has been identified as Varun.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm