ಬ್ರೇಕಿಂಗ್ ನ್ಯೂಸ್
24-09-24 01:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹೌದು.. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಹೈಕೋರ್ಟ್ ಹೇಳಿದ್ದೇನು?
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.
ಸಿಎಂ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನಷ್ಟೇ ಸೆಕ್ಷನ್ 17 ಎ ಅಡಿಯಲ್ಲಿ ನೋಡಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯಷ್ಟೇ ನೀಡುತ್ತಿದ್ದಾರೆ. ಹೀಗಾಗಿ ಅವರು ವಿವರವಾದ ಕಾರಣಗಳನ್ನು ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.
In a setback for Karnataka Chief Minister Siddaramaiah, the Karnataka High Court Tuesday dismissed his petition against an approval granted by the state Governor to three persons to file cases of corruption against him over a land grant to his wife by the Mysore Urban Development Authority (MUDA).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm