ಬ್ರೇಕಿಂಗ್ ನ್ಯೂಸ್
24-09-24 01:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹೌದು.. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಹೈಕೋರ್ಟ್ ಹೇಳಿದ್ದೇನು?
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.
ಸಿಎಂ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನಷ್ಟೇ ಸೆಕ್ಷನ್ 17 ಎ ಅಡಿಯಲ್ಲಿ ನೋಡಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯಷ್ಟೇ ನೀಡುತ್ತಿದ್ದಾರೆ. ಹೀಗಾಗಿ ಅವರು ವಿವರವಾದ ಕಾರಣಗಳನ್ನು ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.
In a setback for Karnataka Chief Minister Siddaramaiah, the Karnataka High Court Tuesday dismissed his petition against an approval granted by the state Governor to three persons to file cases of corruption against him over a land grant to his wife by the Mysore Urban Development Authority (MUDA).
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm