ಬ್ರೇಕಿಂಗ್ ನ್ಯೂಸ್
24-09-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಹೈಕೋರ್ಟ್ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರ ವಿರುದ್ಧದ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ದೇಶದ ನ್ಯಾಯಾಂಗ ವ್ಯವಸ್ಥೆಗೆ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.
'ಮತ್ತೊಮ್ಮೆ ಹೇಳುತ್ತೇನೆ, ಮುಖ್ಯಮಂತ್ರಿಗೆ ಯಾವುದೇ ಹಿನ್ನಡೆಯಾಗಿಲ್ಲ. ನಾನು ಸೇರಿದಂತೆ ಪಕ್ಷದ ಎಲ್ಲಾ ನಾಯಕರ ವಿರುದ್ದದ ದೊಡ್ಡ ಪಿತೂರಿಯಾಗಿದೆ. ನಾನು ಎಲ್ಲಾ ದೋಷ ಆರೋಪಗಳಿಂದ ಹೊರಗೆ ಬಂದಿಲ್ಲವೇ? ಹಾಗೆಯೇ ಈ ವಿಚಾರದಲ್ಲಿಯೂ ಹೋರಾಟ ಮಾಡುತ್ತೇವೆ. ದೇಶದ ನ್ಯಾಯಿಕ ವ್ಯವಸ್ಥೆ ಗೌರವಿಸುತ್ತೇವೆ. ನ್ಯಾಯ ಸ್ಥಾನದಿಂದ ಅನ್ಯಾಯಕ್ಕೆ ಅವಕಾಶವಿಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.
No question of CM Siddaramaiah resigning from CM post says DK Shivakumar. This is all the startagey of BJP to spoil the name of Congress he slammed.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm