ಬ್ರೇಕಿಂಗ್ ನ್ಯೂಸ್
24-09-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಹೈಕೋರ್ಟ್ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರ ವಿರುದ್ಧದ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ದೇಶದ ನ್ಯಾಯಾಂಗ ವ್ಯವಸ್ಥೆಗೆ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.
'ಮತ್ತೊಮ್ಮೆ ಹೇಳುತ್ತೇನೆ, ಮುಖ್ಯಮಂತ್ರಿಗೆ ಯಾವುದೇ ಹಿನ್ನಡೆಯಾಗಿಲ್ಲ. ನಾನು ಸೇರಿದಂತೆ ಪಕ್ಷದ ಎಲ್ಲಾ ನಾಯಕರ ವಿರುದ್ದದ ದೊಡ್ಡ ಪಿತೂರಿಯಾಗಿದೆ. ನಾನು ಎಲ್ಲಾ ದೋಷ ಆರೋಪಗಳಿಂದ ಹೊರಗೆ ಬಂದಿಲ್ಲವೇ? ಹಾಗೆಯೇ ಈ ವಿಚಾರದಲ್ಲಿಯೂ ಹೋರಾಟ ಮಾಡುತ್ತೇವೆ. ದೇಶದ ನ್ಯಾಯಿಕ ವ್ಯವಸ್ಥೆ ಗೌರವಿಸುತ್ತೇವೆ. ನ್ಯಾಯ ಸ್ಥಾನದಿಂದ ಅನ್ಯಾಯಕ್ಕೆ ಅವಕಾಶವಿಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.
No question of CM Siddaramaiah resigning from CM post says DK Shivakumar. This is all the startagey of BJP to spoil the name of Congress he slammed.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm