ಬ್ರೇಕಿಂಗ್ ನ್ಯೂಸ್
27-09-24 06:19 pm HK News Desk ಕರ್ನಾಟಕ
ಹುಬ್ಬಳ್ಳಿ , ಸೆ 27: ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೋಲಿಸ್ ರಿಗೆ ಎಫ್ಐಆರ್ ದಾಖಲಿಸುವಂತೆ ಹೇಳಿದ್ದರೂ ಸಹ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದಿದ್ದೇ ಆದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ಈ ಹಿಂದೆ ಬಹಳಷ್ಟು ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೇಯಾ ಎಂದು ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಅದನ್ನೇ ನಾವು ಈಗ ಹೇಳುತ್ತಿದ್ದೇವೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದಲ್ಲಿ ನ್ಯಾಯಾಲಯದ ತೀರ್ಪಿಗೆ ತಲೆ ಬಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮುಂದೆ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತಾದ ಮೇಲೆ ಪುನಃ ಸಿಎಂ ಆಗಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದರು.
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ರಾಜ್ಯ ಸರ್ಕಾರದ ಸಚಿವ ಸಂಪುಟದ ನಿರ್ಧಾರ. ರಾಜ್ಯಪಾಲರು ಕೇಳಿರುವ ಮಾಹಿತಿ, ದಾಖಲೆ ನೀಡಲು ಈ ಸರ್ಕಾರಕ್ಕೆ ಸಮಸ್ಯೆ ಏನಿದೆ? ಈ ಸರ್ಕಾರದಲ್ಲಿ ಸಾಕಷ್ಟು ಲೋಪದೋಷಗಳು ಆಗಿವೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ. ದಾಖಲೆಗಳು ಹೊರಗೆ ಬಂದಿದ್ದರಿಂದಲೇ ಮುಡಾ ಹಗರಣ, ವಾಲ್ಮೀಕಿ ನಿಗಮದ ಅಕ್ರಮ ಹೊರಗೆ ಬಂದಿದ್ದು. ಇಂಥವುದನ್ಸಂಸ್ಥೆಗಳ ಮುಚ್ಚಿಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಬಾಗಿಲ ಮೂಲಕ ಪ್ರಯತ್ನ ಮಾಡುತ್ತಿದೆ ಎಂದು ಅವರು ಇದೇ ವೇಳೆ ಆರೋಪಿಸಿದರು.
ರಾಜ್ಯದಲ್ಲಿ ಹೊಸ ಪ್ರಕರಣಗಳಲ್ಲಿ ಸಿಬಿಐ ತನಿಖೆ ಕೈಗೊಳ್ಳಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕೆಂಬ ಷರತ್ತು ವಿಧಿಸಿರುವುದು ಸರಿಯಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸದನದಲ್ಲಿ ಕ್ಲೀನ್ ಚಿಟ್ ನೀಡಿದ್ದರು. ಇಡಿ, ಸಿಬಿಐ ತನಿಖೆ ನಾಗೇಂದ್ರ ಅವರು ತಪ್ಪಿತಸ್ಥರು ಎಂಬುದು ಬಹಿರಂಗಗೊಂಡಿದೆ. ಇದರಿಂದ ನಾಗೇಂದ್ರ ಬಳಿಕ ತಮ್ಮದೇ ಪಾಳಿ ಎಂದು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಹಾಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನಿರ್ಣಯ ಕೈಗೊಂಡಿದೆ ಎಂದರು.
Bjp MLA Mahesh Tenginakai slams CM Siddaramaiah, says he must resign after FIR. If he's proved innocent in muda case then let him again be the CM of Karnataka he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm