ಬ್ರೇಕಿಂಗ್ ನ್ಯೂಸ್
27-09-24 10:15 pm Bangalore Correspondent ಕರ್ನಾಟಕ
ಮಂಗಳೂರು, ಸೆ.27: ಖಾಸಗಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಯೊಬ್ಬ ಬೈಕನ್ನು ಅತಿ ಧಾವಂತದಿಂದ ಚಲಾಯಿಸಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಮಡಿಕೇರಿ ಮೂಲದ, ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಚಂದನ್ (20) ಮೃತ ವಿದ್ಯಾರ್ಥಿ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ನಡೆದಿದ್ದು, ವಾಮಂಜೂರು ಕಡೆಯಿಂದ ಕುಲಶೇಖರದತ್ತ ಖಾಸಗಿ ಬಸ್ಸೊಂದು ಅತಿ ವೇಗದಿಂದ ಬರುತ್ತಿತ್ತು. ಇದೇ ವೇಳೆ, ಆ ಬಸ್ಸನ್ನು ವಿದ್ಯಾರ್ಥಿ ಚಂದನ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬಲಭಾಗದಿಂದ ನುಗ್ಗಿ ಬಂದಿದ್ದಾನೆ. ಆದರೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿನ ಹ್ಯಾಂಡಲ್ ಗೆ ಈತನ ಬೈಕ್ ತಾಗಿದ್ದು ಎಡಭಾಗಕ್ಕೆ ವಾಲಿ ಬಿದ್ದಿದ್ದಾನೆ. ಇದರಿಂದ ಬದಿಯಿಂದ ಸಾಗುತ್ತಿದ್ದ ಬಸ್ಸಿನ ಹಿಂಭಾಗದ ಚಕ್ರಕ್ಕೆ ತಲೆ ಸಿಲುಕಿದ್ದು, ಹೆಲ್ಮೆಟ್ ಸಹಿತ ತಲೆಯ ಭಾಗ ಹೋಳಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಖಾಸಗಿ ಬಸ್ಸನ್ನು ಪ್ರಮೋದ್ ಎಂಬಾತ ಚಲಾಯಿಸುತ್ತಿದ್ದು, ಅತಿ ವೇಗದ ಚಲಾವಣೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಬೈಕನ್ನು ಚೇತನ್ ಕುಮಾರ್ ಎಂಬಾತ ಚಲಾಯಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.
Mangalore accident, Bike rider dies after being run over by bus at kulshekar. The deceased has been identified as Chandan from Madikeri. The deceased is Chandan, a BCom student, police said. According to police, the accident occurred when Chandan, while riding his bike, overtook a bus.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm