ಬ್ರೇಕಿಂಗ್ ನ್ಯೂಸ್
27-09-24 10:15 pm Bangalore Correspondent ಕರ್ನಾಟಕ
ಮಂಗಳೂರು, ಸೆ.27: ಖಾಸಗಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಯೊಬ್ಬ ಬೈಕನ್ನು ಅತಿ ಧಾವಂತದಿಂದ ಚಲಾಯಿಸಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಮಡಿಕೇರಿ ಮೂಲದ, ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಚಂದನ್ (20) ಮೃತ ವಿದ್ಯಾರ್ಥಿ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ನಡೆದಿದ್ದು, ವಾಮಂಜೂರು ಕಡೆಯಿಂದ ಕುಲಶೇಖರದತ್ತ ಖಾಸಗಿ ಬಸ್ಸೊಂದು ಅತಿ ವೇಗದಿಂದ ಬರುತ್ತಿತ್ತು. ಇದೇ ವೇಳೆ, ಆ ಬಸ್ಸನ್ನು ವಿದ್ಯಾರ್ಥಿ ಚಂದನ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬಲಭಾಗದಿಂದ ನುಗ್ಗಿ ಬಂದಿದ್ದಾನೆ. ಆದರೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿನ ಹ್ಯಾಂಡಲ್ ಗೆ ಈತನ ಬೈಕ್ ತಾಗಿದ್ದು ಎಡಭಾಗಕ್ಕೆ ವಾಲಿ ಬಿದ್ದಿದ್ದಾನೆ. ಇದರಿಂದ ಬದಿಯಿಂದ ಸಾಗುತ್ತಿದ್ದ ಬಸ್ಸಿನ ಹಿಂಭಾಗದ ಚಕ್ರಕ್ಕೆ ತಲೆ ಸಿಲುಕಿದ್ದು, ಹೆಲ್ಮೆಟ್ ಸಹಿತ ತಲೆಯ ಭಾಗ ಹೋಳಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಖಾಸಗಿ ಬಸ್ಸನ್ನು ಪ್ರಮೋದ್ ಎಂಬಾತ ಚಲಾಯಿಸುತ್ತಿದ್ದು, ಅತಿ ವೇಗದ ಚಲಾವಣೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಬೈಕನ್ನು ಚೇತನ್ ಕುಮಾರ್ ಎಂಬಾತ ಚಲಾಯಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.
Mangalore accident, Bike rider dies after being run over by bus at kulshekar. The deceased has been identified as Chandan from Madikeri. The deceased is Chandan, a BCom student, police said. According to police, the accident occurred when Chandan, while riding his bike, overtook a bus.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm