ಬ್ರೇಕಿಂಗ್ ನ್ಯೂಸ್
27-09-24 11:03 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ಮೇಲೆಯೂ ಅಂಥಹದ್ದೇ ಭೂಹಗರಣ ಸುತ್ತಿಕೊಳ್ಳುವ ಸಾಧ್ಯತೆ ಎದುರಾಗಿದೆ. ಈ ಕುರಿತಾಗಿ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.
ಖರ್ಗೆ ಕುಟುಂಬದ ಏಳು ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದರಲ್ಲಿ ಎಂ.ಬಿ.ಪಾಟೀಲ್ ಮತ್ತು ಐಎಎಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್ಗೆ ಐದು ಎಕರೆ ಭೂಮಿಯನ್ನು ಸಿಎ ಸೈಟ್ ರೂಪದಲ್ಲಿ ನೀಡಿರುವುದಾಗಿ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಸಮೀಪದಲ್ಲಿ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್ ಹೆಸರಿನಲ್ಲಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಮಲ್ಲಿಕಾರ್ಜುನ ಖರ್ಗೆ, ಪುತ್ರರಾದ ಪ್ರಿಯಾಂಕ್ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಮತ್ತು ಕುಟುಂಬದ ಹೆಸರಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಶೈಕ್ಷಣಿಕ ಉದ್ದೇಶಕ್ಕೆಂದು ಅಕ್ರಮವಾಗಿ ಎರಡೆರಡು ಬಾರಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ.
2014ರಲ್ಲಿ ಬಿಟಿಎಂ 4ನೇ ಸ್ಟೇಜ್ನ ಎರಡನೇ ಬ್ಲಾಕ್ನಲ್ಲಿ 2 ಎಕರೆ ಬಿಡಿಎ ವ್ಯಾಪ್ತಿಯ ಸಿಎ ನಿವೇಶನ, 2024ರಲ್ಲಿ ಬಾಗಲೂರು ಬಳಿ 5 ಎಕರೆಯಷ್ಟು ಕೆಐಎಡಿಬಿ ಭೂಮಿಯನ್ನು ಮತ್ತೆ ಇವರ ಒಡೆತನದ ಟ್ರಸ್ಟ್ಗೆ ಪರಭಾರೆ ಮಾಡಿಕೊಳ್ಳಲಾಗಿದೆ. ಈ ಎರಡೂ ನಿವೇಶನಗಳನ್ನು ಒಂದೇ ಸಂಸ್ಥೆಗೆ ಒಂದೇ ಉದ್ದೇಶಕ್ಕೆ ಈ ಟ್ರಸ್ಟ್ ಪಡೆದುಕೊಂಡಿದೆ. ಈ ಎರಡೂ ನಿವೇಶನಗಳ ಪ್ರಸ್ತುತ ಒಟ್ಟು ಮೌಲ್ಯ ಬರೋಬ್ಬರಿ 240 ಕೋಟಿ ರೂ. ಅಧಿಕ ಮೊತ್ತ ಎನ್ನಲಾಗಿದೆ.
ಇದೇ ವೇಳೆ, ಖರ್ಗೆ ಕುಟುಂಬದ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿರುವ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಶ ಮಾಹಿತಿಯೊಂದಿಗೆ ಅಭಿಪ್ರಾಯ ಕೇಳಿದ್ದಾರೆ. ಕಾನೂನು ತಜ್ಞರು ರಾಜ್ಯಪಾಲರಿಗೆ ಅಭಿಪ್ರಾಯ ಸಲ್ಲಿಕೆ ಮಾಡಿದ್ದು ಖರ್ಗೆ ಕುಟುಂಬದ ವಿರುದ್ದೆವೂ ತನಿಖೆ ಎದುರಾಗುವ ಸಾಧ್ಯತೆ ಇದೆ.
Ramesh NR, a prominent leader of the Bharatiya Janata Party (BJP) in Karnataka, has lodged a formal complaint with the Karnataka Lokayukta against Congress president Mallikarjun Kharge and several others, alleging that the Siddhartha Vihar Trust, purportedly owned by Kharge's family, is involved in a land grab scheme.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm