ಬ್ರೇಕಿಂಗ್ ನ್ಯೂಸ್
28-09-24 01:09 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧವೂ ಕಾಂಗ್ರೆಸ್ ಸರ್ಕಾರ ಎಫ್ಐಆರ್ ಅಸ್ತ್ರ ಪ್ರಯೋಗಿಸಿದೆ. ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಅದನ್ನು ಉಲ್ಲೇಖಿಸಿ ಸಚಿವರ ರಾಜೀನಾಮೆ ಕೇಳಲು ಮುಂದಾಗಿದೆ.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ಗೆ ಕಾಂಗ್ರೆಸ್ ಕೌಂಟರ್ ನೀಡಿದೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಮತ್ತು ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಎಚ್ಡಿ ಕುಮಾರಸ್ವಾಮಿ ವಿರುದ್ಧವೂ ಪ್ರಕರಣ ದಾಖಲಾಗಿದೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿಂತೆ ಶುಕ್ರವಾರ ಎಚ್ಡಿಕೆ ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ್ದಾರೆ. ಇದೇ ವೇಳೆ, ಚುನಾವಣಾ ಬಾಂಡ್ ಖರೀದಿ ವಿಚಾರದಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯ ಅನುಮತಿ ನೀಡಿದ್ದು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರಿ ನಿರ್ದೇಶನಾಲಯ ಬಳಸಿಕೊಂಡು ಸಚಿವೆ ನಿರ್ಮಲಾ ಸೀತಾರಾಮನ್, ಜೆಪಿ ನಡ್ಡಾ, ವಿಜಯೇಂದ್ರ, ಮಾಜಿ ಅಧ್ಯಕ್ಷ ನಳಿನ್ ಕಟೀಲ್ ವಿರುದ್ಧ ಸುಲಿಗೆ ಆರೋಪದಲ್ಲಿ ತನಿಖೆಗೆ ಆದೇಶ ಮಾಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಅಯ್ಯರ್ ಎಂಬವರು ದಾಖಲಿಸಿರುವ ದೂರಿಗೆ ಸಂಬಂಧಿಸಿ ತನಿಖೆಗೆ ಕೋರ್ಟ್ ಆದೇಶ ಮಾಡಿದೆ. ಈ ಪ್ರಕರಣ ಕಾಂಗ್ರೆಸ್ ಪಾಲಿಗೆ ಪ್ರಖರ ಅಸ್ತ್ರವಾಗಿ ಪರಿಣಮಿಸಲಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿರುವುದರಿಂದ ಅವರು ರಾಜೀನಾಮೆ ಕೊಡುತ್ತಾರಾ? ಎಂದು ಸಿಎಂ ಸಿದ್ದರಾಮಯ್ಯ ಈಗ ಪ್ರಶ್ನಿಸಿದ್ದಾರೆ.
After the Mysore Lokayukta police filed an FIR against CM Siddaramaiah in connection with the Muda scam, the Congress government also used the FIR weapon against BJP and JDS leaders.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm