ಬ್ರೇಕಿಂಗ್ ನ್ಯೂಸ್
28-09-24 04:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಸಿದ್ದರಾಮಯ್ಯ ಅವರು ಇಂದು ಇರಬಹುದು, ನಾಳೆ ಇಲ್ಲದೆಯೂ ಇರಬಹುದು. ಆದರೆ ಕಾಂಗ್ರೆಸ್ ಪಕ್ಷ ಶಾಶ್ವತವಾಗಿರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಿದ್ದರಾಮಯ್ಯ ಬಿಕ್ಕಟ್ಟಿನಲ್ಲಿರುವ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರು ಈ ರೀತಿ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಅವರು, ಯಾರನ್ನೇ ಆಗಲಿ ವೈಯಕ್ತಿಕವಾಗಿ ಗುರಿ ಮಾಡಬಾರದು. ಸಿದ್ದರಾಮಯ್ಯ ವರ್ಚಸ್ಸಿಗೆ ಕಳಂಕ ಹಚ್ಚುವ ಮೂಲಕ ಕಾಂಗ್ರೆಸ್ ಪಕ್ಷಕ್ಕೂ ಹಾನಿ ಮಾಡುವುದು ಬಿಜೆಪಿ ಉದ್ದೇಶ. ಯಾರೇ ಆದರೂ ಇಂದು ಇರಬಹುದು, ನಾಳೆ ಬದಲಾಗಬಹುದು. ಆದರೆ, ಪಕ್ಷ ಮುಂದುವರಿಯುತ್ತದೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
ಮುಡಾ ಪ್ರಕರಣದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿಲ್ಲ. ದೋಷಿ ಎಂದೂ ತೀರ್ಮಾನವಾಗಿಲ್ಲ. ಆದರೂ ಪ್ರತಿದಿನ ಈ ಕುರಿತೇ ಹೆಚ್ಚು ಚರ್ಚೆಯಾಗುತ್ತಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ಹಿಂದೆ ಗುಜರಾತ್ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾ ಹತ್ಯಾಕಾಂಡ ನಡೆದಿತ್ತು. ಆ ವೇಳೆ ಅವರು ರಾಜೀನಾಮೆ ನೀಡಿದ್ದರೇ? ಅಮಿತ್ ಷಾ ವಿರುದ್ಧವೂ ಹಲವು ಪ್ರಕರಣಗಳು ದಾಖಲಾಗಿದ್ದವು. ಅವರೂ ರಾಜೀನಾಮೆ ನೀಡಿರಲಿಲ್ಲ. ಬಿಜೆಪಿಯವರು ಯಾವುದೋ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ವ್ಯಕ್ತಿಯ ವರ್ಚಸ್ಸನ್ನು ಹಾಳು ಮಾಡುವ ಮೂಲಕ ಪಕ್ಷದ ವರ್ಚಸ್ಸಿಗೂ ಧಕ್ಕೆ ಉಂಟು ಮಾಡುವ ಹುನ್ನಾರಗಳನ್ನು ಬಿಜೆಪಿ ನಡೆಸಿದೆ. ಬಿಜೆಪಿಯ ಕೇಂದ್ರ ನಾಯಕರ ಗುರಿ ಕಾಂಗ್ರೆಸ್ ಪಕ್ಷವಾಗಿದೆ. ವ್ಯಕ್ತಿಗತ ಗುರಿಯಿಲ್ಲ. ಏನೇ ಆದರೂ ಪಕ್ಷ ಮುಂದುವರೆಯುತ್ತದೆ. ನಮ್ಮ ಪಕ್ಷವನ್ನು ಮುಗಿಸಲು ಮೂಲ ಮತಬ್ಯಾಂಕನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಈ ಎಲ್ಲಾ ಪ್ರತಿಭಟನೆಗಳು, ಚರ್ಚೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
All-India Congress Committee (AICC) president Mallikarjun Kharge on Friday, while alleging that BJP is targeting Chief Minister Siddaramaiah in the MUDA case to damage Congress, clarified that the party will have to move on irrespective of Siddaramaiah being the CM.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm