ಬ್ರೇಕಿಂಗ್ ನ್ಯೂಸ್
28-09-24 04:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಸಿದ್ದರಾಮಯ್ಯ ಅವರು ಇಂದು ಇರಬಹುದು, ನಾಳೆ ಇಲ್ಲದೆಯೂ ಇರಬಹುದು. ಆದರೆ ಕಾಂಗ್ರೆಸ್ ಪಕ್ಷ ಶಾಶ್ವತವಾಗಿರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಿದ್ದರಾಮಯ್ಯ ಬಿಕ್ಕಟ್ಟಿನಲ್ಲಿರುವ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರು ಈ ರೀತಿ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಅವರು, ಯಾರನ್ನೇ ಆಗಲಿ ವೈಯಕ್ತಿಕವಾಗಿ ಗುರಿ ಮಾಡಬಾರದು. ಸಿದ್ದರಾಮಯ್ಯ ವರ್ಚಸ್ಸಿಗೆ ಕಳಂಕ ಹಚ್ಚುವ ಮೂಲಕ ಕಾಂಗ್ರೆಸ್ ಪಕ್ಷಕ್ಕೂ ಹಾನಿ ಮಾಡುವುದು ಬಿಜೆಪಿ ಉದ್ದೇಶ. ಯಾರೇ ಆದರೂ ಇಂದು ಇರಬಹುದು, ನಾಳೆ ಬದಲಾಗಬಹುದು. ಆದರೆ, ಪಕ್ಷ ಮುಂದುವರಿಯುತ್ತದೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
ಮುಡಾ ಪ್ರಕರಣದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿಲ್ಲ. ದೋಷಿ ಎಂದೂ ತೀರ್ಮಾನವಾಗಿಲ್ಲ. ಆದರೂ ಪ್ರತಿದಿನ ಈ ಕುರಿತೇ ಹೆಚ್ಚು ಚರ್ಚೆಯಾಗುತ್ತಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ಹಿಂದೆ ಗುಜರಾತ್ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾ ಹತ್ಯಾಕಾಂಡ ನಡೆದಿತ್ತು. ಆ ವೇಳೆ ಅವರು ರಾಜೀನಾಮೆ ನೀಡಿದ್ದರೇ? ಅಮಿತ್ ಷಾ ವಿರುದ್ಧವೂ ಹಲವು ಪ್ರಕರಣಗಳು ದಾಖಲಾಗಿದ್ದವು. ಅವರೂ ರಾಜೀನಾಮೆ ನೀಡಿರಲಿಲ್ಲ. ಬಿಜೆಪಿಯವರು ಯಾವುದೋ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ವ್ಯಕ್ತಿಯ ವರ್ಚಸ್ಸನ್ನು ಹಾಳು ಮಾಡುವ ಮೂಲಕ ಪಕ್ಷದ ವರ್ಚಸ್ಸಿಗೂ ಧಕ್ಕೆ ಉಂಟು ಮಾಡುವ ಹುನ್ನಾರಗಳನ್ನು ಬಿಜೆಪಿ ನಡೆಸಿದೆ. ಬಿಜೆಪಿಯ ಕೇಂದ್ರ ನಾಯಕರ ಗುರಿ ಕಾಂಗ್ರೆಸ್ ಪಕ್ಷವಾಗಿದೆ. ವ್ಯಕ್ತಿಗತ ಗುರಿಯಿಲ್ಲ. ಏನೇ ಆದರೂ ಪಕ್ಷ ಮುಂದುವರೆಯುತ್ತದೆ. ನಮ್ಮ ಪಕ್ಷವನ್ನು ಮುಗಿಸಲು ಮೂಲ ಮತಬ್ಯಾಂಕನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಈ ಎಲ್ಲಾ ಪ್ರತಿಭಟನೆಗಳು, ಚರ್ಚೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
All-India Congress Committee (AICC) president Mallikarjun Kharge on Friday, while alleging that BJP is targeting Chief Minister Siddaramaiah in the MUDA case to damage Congress, clarified that the party will have to move on irrespective of Siddaramaiah being the CM.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm