ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ, ತನಿಖೆಗೆ ನಾಲ್ಕು ತಂಡ ರಚಿಸಿದ ಮೈಸೂರು ಲೋಕಾಯುಕ್ತ 

28-09-24 09:53 pm       Bangalore Correspondent   ಕರ್ನಾಟಕ

ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯಕ್ಕೂ (ಇಡಿ) ದೂರು ನೀಡಿದ್ದಾರೆ. 

ಬೆಂಗಳೂರು, ಸೆ.28: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯಕ್ಕೂ (ಇಡಿ) ದೂರು ನೀಡಿದ್ದಾರೆ. 

59 ಕೋಟಿ ರೂ. ಮೌಲ್ಯದ 14 ಸೈಟುಗಳ ಹಗರಣದಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ಇ-ಮೇಲ್ ಮೂಲಕ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. 

ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರವನ್ನು ಇಡಿ ಬೆಂಗಳೂರು ನಿರ್ದೇಶಕರಿಗೆ ಬರೆದಿದ್ದು ಮನಿ ಲ್ಯಾಂಡರಿಂಗ್ ಆ್ಯಕ್ಟ್​ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರೇ ಎ-1 ಆರೋಪಿಯಾಗಿದ್ದು, ತನಿಖೆಯ ಟೆನ್ಷನ್ ಶುರುವಾಗಿದೆ. ಶನಿವಾರ, ಭಾನುವಾರ ಲೋಕಾಯುಕ್ತ ಕಚೇರಿಗೆ ರಜೆ ಇರುವ ಕಾರಣದಿಂದ ಸೋಮವಾರದಿಂದ ಅಧಿಕೃತ ತನಿಖೆ ಶುರುವಾಗಲಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಬ್ಬಂದಿ ಸಭೆ ನಡೆಸಿದ ಎಸ್‌ಪಿ ಉದೇಶ್‌, ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಿದ್ದಾರೆ. ಎಸ್​ಪಿ ಉದೇಶ್​​​, ಡಿವೈಎಸ್​ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್​ಪಿ ಮ್ಯಾಥ್ಯೂ ಥಾಮಸ್​​​ ಹಾಗೂ ಇನ್ಸ್​ಪೆಕ್ಟರ್​​ ಒಳಗೊಂಡ ನಾಲ್ಕು ತನಿಖಾ ತಂಡಗಳ ರಚನೆ ಮಾಡಲಾಗಿದೆ.

The FIR registered against Chief Minister Siddaramaiah by the Lokayukta in connection with illegal allotment of sites to his wife by Mysuru Urban Development Authority (MUDA) was based on the complaint of a common citizen and has upheld the supremacy of the Constitution, according to activist Snehamayi Krishna.