Adgp IPS Chandrashekar, H D Kumaraswamy, Pig: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ; ಕುಮಾರಸ್ವಾಮಿ ಆರೋಪಕ್ಕೆ ಎಡಿಜಿಪಿ ಚಂದ್ರಶೇಖರ್ ಟಾಂಗ್ 

29-09-24 02:03 pm       Bangalore Correspondent   ಕರ್ನಾಟಕ

ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲೆ ಭ್ರಷ್ಟಚಾರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು, ಸೆ.29: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲೆ ಭ್ರಷ್ಟಚಾರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರು, ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ. ತನಿಖೆ ಮಾಡಬೇಕು. ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು.

ಇದಕ್ಕೆ ಪತ್ರದ ಮೂಲಕ ತಮ್ಮ ಸಿಬ್ಬಂದಿಗಳಿಗೆ ಅಭಯ ನೀಡಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಆತ ಪ್ರಕರಣವೊಂದರ ಆರೋಪಿ ಅಷ್ಟೆ ಎಂದು ಖಾರವಾಗಿ ಬರೆದಿದ್ದಾರೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. 

ಜಾರ್ಜ್ ಬರ್ನಾಡ್ ಶಾ ಅವರ ಪ್ರಸಿದ್ಧ ಇಂಗ್ಲಿಷ್ ಸಾಲನ್ನು ಬಳಸಿರುವ ಚಂದ್ರಶೇಖರ್, ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಹೀಗಾಗಿ ನಾವು ಹಂದಿಗಳ ಜೊತೆ ಜಗಳ ಮಾಡಬಾರದು ಎಂದು ಹೇಳಿರುವ ಚಂದ್ರಶೇಖರ್ ಕೊನೆಯಲ್ಲಿ ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಬರೆದಿದ್ದಾರೆ.

Adgp IPS Chandrashekar calls H D Kumaraswamy as Pig, says won't fight with pigs. Additional Director General of Police,Lokayukta SIT,M. Chandrashekhar on Saturday wrote to his colleagues to continue discharge their duties without fear. In a letter to boost the morale,Mr.Chandrashekhar also quoted Bernard Shah line “never wrestle with pigs ” in a mean to tell them avoid such confronted and focus on the goal .