ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm