ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm