ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm