ಬ್ರೇಕಿಂಗ್ ನ್ಯೂಸ್
01-10-24 11:19 am Bangalore Correspondent ಕರ್ನಾಟಕ
ಬೆಂಗಳೂರು, ಅ.1: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಇತ್ತ ಮುಖ್ಯಮಂತ್ರಿಗಳ ಪತ್ನಿ ವಿವಾದಕ್ಕೆ ಕಾರಣವಾದ 14 ಸೈಟ್ ಗಳನ್ನೇ ಸರ್ಕಾರಕ್ಕೆ ಹಿಂದಕ್ಕೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ತಮಗೆ ಹಂಚಿಕೆ ಮಾಡಲಾದ ಎಲ್ಲಾ 14 ಸೈಟ್ಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ. 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರ ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿತ್ತು. ಇದಕ್ಕೆ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4ನೇ ಹಂತದಲ್ಲಿ ನನಗೆ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ಇದನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಪಾರ್ವತಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ದೂರುದಾರ ಸ್ನೇಹಮಯಿ ಕೃಷ್ಣ ದೂರಿನಂತೆ, ಮುಡಾ ಹಗರಣ ಕುರಿತಾಗಿ ಜಾರಿ ನಿರ್ದೇಶನಾಲಯದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದರ ಬೆನ್ನಲ್ಲೇ ಕಾನೂನು ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದು, ಇಡಿ ದಾಖಲಿಸಿರುವ ಇಸಿಐಆರ್ ಗೆ ತಡೆಯಾಜ್ಞೆ ಕೋರಿ ಮಂಗಳವಾರವೇ ಇ.ಡಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಗೌಪ್ಯ ಸ್ಥಳದಲ್ಲಿ ಆಪ್ತ ಸಚಿವರು ಹಾಗೂ ಕಾನೂನು ತಜ್ಞರೊಂದಿಗೆ ಸಿದ್ದರಾಮಯ್ಯ ಸುದೀರ್ಘ ಸಮಾಲೋಚನೆ ನಡೆಸಿದರು. ಎಐಸಿಸಿ ವರಿಷ್ಠರನ್ನೂ ಸಂಪರ್ಕಿಸಿ ಸಲಹೆ ಪಡೆಯಲಾಗಿದ್ದು, ತಕ್ಷಣಕ್ಕೆ ಇಸಿಐಆರ್ಗೆ ಇ.ಡಿ. ವಿಶೇಷ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದಾರೆ.
Karnataka Chief Minister Siddaramaiah’s wife, BM Parvathi, in a letter to the Mysuru Urban Development Authority (MUDA) said she would return the land sites she had received from the authority. She said that she had never pursued any personal gain during her husband’s long political honour and no material possession could outweigh her husband’s clean image. The chief minister said that while he is surprised by her decision, he respects it.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am