ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm