ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm