ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm