ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm