ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm