ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.


ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm