ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm