ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.


ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm