ಬ್ರೇಕಿಂಗ್ ನ್ಯೂಸ್
01-10-24 05:24 pm HK News Desk ಕರ್ನಾಟಕ
ಮೈಸೂರು, ಅ 1: ಹೊಗಳು ಭಟ್ಟರು ಬಹುಪರಾಕ್ ಹಾಕುವವರನ್ನು ಇಟ್ಟುಕೊಂಡ ಪರಿಣಾಮ ಸಿಎಂ ಸಿದ್ದರಾಮಯ್ಯನವರಿಗೆ ಈ ಸ್ಥಿತಿ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಿದ್ದರಾಮಯ್ಯನವರ ಪತ್ನಿ 14 ಸೈಟ್ ಅನ್ನು ಮರಳಿ ಮುಡಾಕ್ಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ. ಒಡವೆ ಕದ್ದ ಕಳ್ಳ ಒಡವೆ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ? ಇಲ್ಲ ಅಲ್ವಾ? ಎಂದು ಪ್ರಶ್ನಿಸಿದರು.
ಎರಡೂವರೆ ತಿಂಗಳ ಹಿಂದೆಯೇ ನಾನು ಸಿಎಂಗೆ ನಿಮಗೆ ಬಂದ ಅಕ್ರಮ ಸೈಟ್ ವಾಪಸ್ ಕೊಟ್ಟು ಬಿಡಿ ಎಂದು ಹೇಳಿದ್ದೆ. ಸಿಎಂ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಬಾರದು ಎಂದು ಅಂದೇ ಹೇಳಿದ್ದೆ. ಎರಡೂವರೆ ತಿಂಗಳ ಹಿಂದೆ ವಾಪಸ್ ಕೊಟ್ಟಿದ್ದರೆ ಇವತ್ತು ಪ್ರಾಸಿಕ್ಯೂಷನ್, ಕೇಸ್ ಏನೂ ಆಗುತ್ತಿರಲಿಲ್ಲ. ಕುರ್ಚಿಯೂ ಅಲುಗಾಡುತ್ತಿರಲಿಲ್ಲ ಎಂದರು.
ಸಿಎಂ ತಮ್ಮ ಸೈಟ್ಗೆ 64 ಕೋಟಿ ರೂ. ಕೇಳಿದ ದಿನವೇ ಸಿಎಂ ಮೇಲಿನ ಗೌರವ, ವಿಶ್ವಾಸ ನೆಲ ಕಚ್ಚಿತು. ಈಗ ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಅಷ್ಟೇ. ಕೊಡದಿದ್ದರೂ ಅಷ್ಟೇ. ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.
ವರುಣಾ ಚುನಾವಣೆ ಸಂದರ್ಭದಲ್ಲೇ ನನಗೆ ಈ ಸೈಟ್ ದಾಖಲಾತಿ ಬಂದಿತ್ತು. ಪತ್ನಿ ಹೆಸರಿದೆ ವೈಯಕ್ತಿಕ ದಾಳಿ ಬೇಡ ಎಂದು ಸುಮ್ಮನಿದ್ದೆ. ರಾಜಕಾರಣಿಗಳೇ ನಿಮ್ಮ ಹೆಂಡತಿ, ಮಕ್ಕಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ. ಈ ಹಿಂದೆ ಸಿಎಂಗಳಾಗಿ ಜೈಲಿಗೆ ಹೋಗಿದ್ದು ಅವರ ಕುಟುಂಬದ, ಮಕ್ಕಳ ಕಾರಣಕ್ಕಾಗಿ ಎಂಬುದು ನೆನಪಿರಲಿ ಎಂದರು.
ಈಗ ಸಿಎಂ ಪತ್ನಿಯ ಭಾವನಾತ್ಮಕ ಕಾರ್ಡ್ ಕೆಲಸ ಮಾಡುವುದಿಲ್ಲ. ಪಾರ್ವತಮ್ಮ ಅವರಿಗೆ ತಮ್ಮ ಪತಿಯ ತಪಸ್ಸಿನ ರೀತಿಯ ರಾಜಕಾರಣಕ್ಕಿಂತಾ ಸೈಟ್ ಮುಖ್ಯವಾಗಿ ಇಷ್ಟು ದಿನ ಹಠ ಹಿಡಿದು ಕೂತಿದ್ದೆ ಬಹುದೊಡ್ಡ ತಪ್ಪು. ಈಗ ಸೈಟ್ ವಾಪಸ್ ಕೊಡುವುದಾಗಿದ್ದರೆ ಹೈಕೋರ್ಟ್ನಲ್ಲಿ ಹೋರಾಟ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು
Mysuru Pratap Simha slams Siddaramaiah, says what's the use of returning site after probe has been ordered.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm