ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm