ಬ್ರೇಕಿಂಗ್ ನ್ಯೂಸ್
02-10-24 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.2: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಸಲಹೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಹಿಂಪಡೆಯಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆಗೆ ಮುಂದಾಗಿರುವ ವಿಚಾರ ತಿಳಿಯುತ್ತಲೇ ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್, ಮುಡಾ ಸೈಟ್ ಗಳನ್ನೇ ಹಿಂದಕ್ಕೆ ನೀಡಲು ಸೂಚಿಸಿದ್ದಾರೆ. ಇದಲ್ಲದೆ, ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೈಟ್ ಹಿಂದಕ್ಕೆ ನೀಡಿರುವ ವಿಚಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ವಲ್ಪ ಮಟ್ಟಿಗೆ ನೆರವಾಗುವ ಸಾಧ್ಯತೆ ಇದೆ.
ನಿವೇಶನಗಳನ್ನು ಒಪ್ಪಿಸುವುದು ಪಿಎಂಎಲ್ಎ ಪ್ರಕರಣವನ್ನು ಎದುರಿಸಲು ಸಿಎಂಗೆ ಸಹಾಯ ಮಾಡುತ್ತದೆಯೇ ಮತ್ತು ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠಕ್ಕೆ ತೆರಳಿ ಲೋಕಾಯುಕ್ತ ತನಿಖೆಯಿಂದ ತಪ್ಪಿಸಿಕೊಳ್ಳಲು ಈ ಕ್ರಮವು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ 14 ಸೈಟ್ಗಳನ್ನು ಹಿಂದಕ್ಕೆ ಒಪ್ಪಿಸುವಂತೆ ಮತ್ತು ಆದಷ್ಟು ಬೇಗ ಪ್ರಕರಣದಿಂದ ದೂರ ಸರಿಯುವಂತೆ ಸಲಹೆ ನೀಡಿದ್ದಾರೆ.
Chief Minister Siddaramaiah’s wife Parvathi decided to surrender the 14 sites allotted to her by the Mysuru Urban Development Authority (MUDA) after senior counsel and former Union minister Kapil Sibal’s advice, according to sources.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm