ಬ್ರೇಕಿಂಗ್ ನ್ಯೂಸ್
03-10-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಅ.3: ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣರಾಗಿದ್ದರೂ ಮಾಡರ್ನಿಸ್ಟ್ ಆಗಿದ್ದರು. ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೆ ವಿರುದ್ಧವಾಗಿರಲಿಲ್ಲ. ಗೋಮಾಂಸವನ್ನೂ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.
ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಆದರೆ, ಅವರು ಮಾಡರ್ನ್ ಕೂಡ ಆಗಿದ್ದರು. ಅವರು ಗೋಮಾಂಸ ಸೇವಿಸುತ್ತಿದ್ದರು ಎಂದೂ ಕೆಲವು ಜನ ಹೇಳುತ್ತಿದ್ದಾರೆ ಎಂದಿದ್ದರು.
ಮಹಾತ್ಮ ಗಾಂಧಿ ಸಸ್ಯಾಹಾರಿಯಾಗಿದ್ದರು. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲಿತ್ತು. ಅವರು ಡೆಮಾಕ್ರಟಿಕ್ ಆಗಿದ್ದರು. ಅವರಲ್ಲಿ ಹಿಂದು ರಾಷ್ಟ್ರದ ಕಲ್ಪನೆ ಇತ್ತು. ಆದರೆ ಧಾರ್ಮಿಕವಾಗಿ ಅಲ್ಲ, ಸಾಂಸ್ಕೃತಿಕವಾಗಿ ಹಿಂದು ರಾಷ್ಟ್ರದ ಕಲ್ಪನೆ ಇತ್ತು ಎಂದು ಗುಂಡೂರಾವ್ ಹೇಳಿದ್ದರು. ಮೊಹಮ್ಮದ್ ಅಲಿ ಜಿನ್ನಾ ಕೂಡ ಡೆಮಾಕ್ರಟಿಕ್ ಆಗಿದ್ದರು. ಅವರು ಕೂಡ ಕಟ್ಟಾ ಇಸ್ಲಾಂ ವಾದಿಯಾಗಿರಲಿಲ್ಲ. ಅವರು ವೈನ್ ಕುಡಿಯುತ್ತಿದ್ದರು, ಹಂದಿ ಮಾಂಸ ಸೇವನೆ ಮಾಡಿದ್ದರು ಎಂದು ಅನೇಕರು ಹೇಳುತ್ತಾರೆ ಎಂದೂ ಗುಂಡೂರಾವ್ ಹೇಳಿದ್ದಾರೆ.
ಇವರ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ಹಿಂದುಗಳ ಬಗ್ಗೆ ಮಾತ್ರ ಅವಹೇಳನ ಮಾತನಾಡುತ್ತೀರಿ ಎಂದು ಟೀಕಿಸಿದ್ದಾರೆ. ಬಿಜೆಪಿ ಐಟಿ ಸೆಲ್ ನಿಂದ ನೇರ ಟ್ವೀಟ್ ಮಾಡಿದ್ದು, ದಿನೇಶ್ ಗುಂಡೂರಾವ್ ಅವರೇ, ಬ್ರಾಹ್ಮಣ ಸಮಾಜದ ವೀರ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್ ಅವರು ಹೇಳಿದ್ದರೋ..??" ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಸಾವರ್ಕರ್ ಸತ್ತು ಸ್ವರ್ಗದಲ್ಲಿದ್ದಾರೆ, ಇನ್ನಾದರೂ ಬಿಡಿ ಅವರನ್ನು. ಕೊನೆಗೆ ಹೆಣ್ಣು ಮಕ್ಕಳು ಬಳೆಯೂ ಹಾಕಬಾರದು ಎಂಬ ಮನಸ್ಥಿತಿಗೆ ಕಾಂಗ್ರೆಸ್ ಬಂದು ಬಿಡುತ್ತದೆಯೋ ಏನೋ? ಹಿಂದೂ ಧರ್ಮವನ್ನು ಟೀಕಿಸುವುದನ್ನು ಬಿಟ್ಟರೆ ಕಾಂಗ್ರೆಸ್ಸಿನವರಿಗೆ ಬೇರೆ ಕಸುಬೇ ಇಲ್ಲವೇ ಎಂದು ವಿಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
Congress leader and Karnataka Health Minister Dinesh Gundu Rao sparked a controversy with his remarks on Vinayak Damodar Savarkar being a non-vegetarian and not against cow slaughter. At an event in Bengaluru organised to mark Gandhi Jayanti, Dinesh Gundu Rao claimed that Savarkar was not only a meat-eater, who consumed beef, but also propagated the practice publicly.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm