ಬ್ರೇಕಿಂಗ್ ನ್ಯೂಸ್
04-10-24 12:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಉಪಾಧ್ಯಕ್ಷರಾಗಿದ್ದ ವಿಜಯ್ ಟಾಟಾ ಎಂಬವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ಟಾಟ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲುತ್ತಿದ್ದು, ಚುನಾವಣೆಗೆ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಎಚ್.ಡಿ. ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
Vijay Tata, JD(S) social media vice president, has lodged a complaint against Union Minister HD Kumaraswamy and MLC Ramesh Gowda at Amruthahalli Police Station in Bengaluru, reported ANI. He alleged that they demanded ₹50 Crores from him and issued life threats. The JD(S) leader also sought police protection in the wake of threats mentioned in his complaint.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm