ಬ್ರೇಕಿಂಗ್ ನ್ಯೂಸ್
04-10-24 12:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಉಪಾಧ್ಯಕ್ಷರಾಗಿದ್ದ ವಿಜಯ್ ಟಾಟಾ ಎಂಬವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ಟಾಟ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲುತ್ತಿದ್ದು, ಚುನಾವಣೆಗೆ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಎಚ್.ಡಿ. ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
Vijay Tata, JD(S) social media vice president, has lodged a complaint against Union Minister HD Kumaraswamy and MLC Ramesh Gowda at Amruthahalli Police Station in Bengaluru, reported ANI. He alleged that they demanded ₹50 Crores from him and issued life threats. The JD(S) leader also sought police protection in the wake of threats mentioned in his complaint.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm