ಬ್ರೇಕಿಂಗ್ ನ್ಯೂಸ್
04-10-24 08:25 pm Bangalore Correspondent ಕರ್ನಾಟಕ
ಬೆಂಗಳೂರು, ಅ 04: ರಾಜಧಾನಿಯಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಸಂದೇಶ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಮಿಲಿಟರಿ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದರು. ಇದೀಗ ನಗರದ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರುವ ಎಂ ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜು ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಇಮೇಲ್ ಬಂದಿದ್ದು, ಕಾಲೇಜು ಸಿಬ್ಬಂದಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದ ಬಳಿಕ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, "ನಗರದ ಮೂರು ಕಾಲೇಜುಗಳಿಗೆ ಇಮೇಲ್ ಮುಖಾಂತರ ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕೂಲಂಕಶವಾಗಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.
Three engineering colleges in the city received an email claiming to alert them to a “Hydrogen-based IED” placed on their premises on Friday (October 4) afternoon. The police pressed the bomb detection and disposal squad and dog squads at the three locations, carried out extensive anti-sabotage checks and determined that the threats were a hoax.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm