ಬ್ರೇಕಿಂಗ್ ನ್ಯೂಸ್
04-10-24 08:25 pm Bangalore Correspondent ಕರ್ನಾಟಕ
ಬೆಂಗಳೂರು, ಅ 04: ರಾಜಧಾನಿಯಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಸಂದೇಶ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಮಿಲಿಟರಿ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದರು. ಇದೀಗ ನಗರದ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರುವ ಎಂ ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜು ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಇಮೇಲ್ ಬಂದಿದ್ದು, ಕಾಲೇಜು ಸಿಬ್ಬಂದಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದ ಬಳಿಕ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, "ನಗರದ ಮೂರು ಕಾಲೇಜುಗಳಿಗೆ ಇಮೇಲ್ ಮುಖಾಂತರ ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕೂಲಂಕಶವಾಗಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.
Three engineering colleges in the city received an email claiming to alert them to a “Hydrogen-based IED” placed on their premises on Friday (October 4) afternoon. The police pressed the bomb detection and disposal squad and dog squads at the three locations, carried out extensive anti-sabotage checks and determined that the threats were a hoax.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm