ಬ್ರೇಕಿಂಗ್ ನ್ಯೂಸ್
08-10-24 10:08 pm HK News Desk ಕರ್ನಾಟಕ
ರಾಯಚೂರು, ಅ.8: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲೆಯ ಸಿಂಧನೂರು ನಗರದಲ್ಲಿಂದು ದಸರಾ ಉತ್ಸವ ಹಿನ್ನೆಲೆಯಲ್ಲಿ ರೈತ ದಸರಾ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರ ಇರುತ್ತದೆ. ಸಿಎಂ ಮುಂದುವರೆಯುತ್ತಾರೆ ಎಂದರು.
ಇದೇ ವೇಳೆ, ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹರಿಯಾಣದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನನಗೆ ಬಹಳ ಆತ್ಮವಿಶ್ವಾಸವಿತ್ತು. ಜನ ತೀರ್ಪು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ನಾವು ಎಲ್ಲಿ ಎಡವಿದ್ದೀವಿ ಎಂದು ಪರಿಶೀಲಿಸುತ್ತೇವೆ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು.
ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಮೇಲೆ ನಮಗೆ ವಿಶ್ವಾಸವಿತ್ತು. ಹರಿಯಾಣದಲ್ಲಿ ನಾವು ಗೆಲ್ಲಬೇಕಾಗಿತ್ತು. ಆದರೆ ಮತದಾರರ ತೀರ್ಪೇ ಅಂತಿಮ. ಹರಿಯಾಣದಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಕುರಿತು ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ನಾವು ಈಗ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದರು.
ಇನ್ನು, ಎಕ್ಸಿಟ್ ಪೋಲನ್ನು ನಾನು ಯಾವತ್ತುೂ ನಂಬಿಲ್ಲ, ಮುಂದೆಯೂ ನಂಬಲ್ಲ ಎಂದು ತಿಳಿಸಿದರು. ಇದೇ ವೇಳೆ, ರಾಜ್ಯದಲ್ಲಿನ ಮೂರು ಉಪಚುನಾವಣೆ ಕ್ಷೇತ್ರಗಳಿಗೆ ಶೀಘ್ರದಲ್ಲೇ ಟಿಕೆಟ್ ಫೈನಲ್ ಮಾಡುತ್ತೇವೆ ಎಂದು ಹೇಳಿದರು.
Deputy Chief Minister DK Shivakumar said that there will be no change of Chief Minister in the state. He was speaking to reporters after inaugurating Raita Dasara on the occasion of Dussehra festival in Sindhanur city of the district.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm