ಬ್ರೇಕಿಂಗ್ ನ್ಯೂಸ್
09-10-24 04:47 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋ ಕೊಡುವುದಾಗಿ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತ ಮಹಿಳೆ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ನೀಡಿದ್ದಾರೆ. ಮುನಿರತ್ನ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರ ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಅದೇ ರೀತಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನೂ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ದರ್ಜೆಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿ ವಿಡಿಯೋ ಮಾಡಿಟ್ಟಿದ್ದಾರೆ. ಬೇಕಿದ್ದರೆ ನನ್ನ ಹಾಗೂ ಮುನಿರತ್ನ ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಬಿಜೆಪಿ ನಾಯಕರಾದ ಅಶ್ವತ್ಥ ನಾರಾಯಣ, ಆರ್. ಅಶೋಕ್ ಗೆ ಸಂತ್ರಸ್ತ ಮಹಿಳೆ ಸವಾಲು ಹಾಕಿದ್ದಾರೆ.

ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ. ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದ ಐದಾರು ಸಂತ್ರಸ್ತ ಮಹಿಳೆಯರು ಹೆದರಿ ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು. ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಅವರದ್ದು 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತನಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಅವರನ್ನು ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲಾ ಎಂದು ಅವರನ್ನು ಕೇಳಬೇಕಿದೆ ಎಂದು ಹೇಳಿದ್ದಾರೆ.
MLA Munirathna honey trap case, many Mla and police officers trapped blackmailed of sex videos says victim harrassed by MLA. Munirathna has Blackmailed several higher police officers and MLA's she alleged.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm