ಬ್ರೇಕಿಂಗ್ ನ್ಯೂಸ್
09-10-24 04:47 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋ ಕೊಡುವುದಾಗಿ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತ ಮಹಿಳೆ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ನೀಡಿದ್ದಾರೆ. ಮುನಿರತ್ನ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರ ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಅದೇ ರೀತಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನೂ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ದರ್ಜೆಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿ ವಿಡಿಯೋ ಮಾಡಿಟ್ಟಿದ್ದಾರೆ. ಬೇಕಿದ್ದರೆ ನನ್ನ ಹಾಗೂ ಮುನಿರತ್ನ ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಬಿಜೆಪಿ ನಾಯಕರಾದ ಅಶ್ವತ್ಥ ನಾರಾಯಣ, ಆರ್. ಅಶೋಕ್ ಗೆ ಸಂತ್ರಸ್ತ ಮಹಿಳೆ ಸವಾಲು ಹಾಕಿದ್ದಾರೆ.
ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ. ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದ ಐದಾರು ಸಂತ್ರಸ್ತ ಮಹಿಳೆಯರು ಹೆದರಿ ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು. ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಅವರದ್ದು 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತನಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಅವರನ್ನು ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲಾ ಎಂದು ಅವರನ್ನು ಕೇಳಬೇಕಿದೆ ಎಂದು ಹೇಳಿದ್ದಾರೆ.
MLA Munirathna honey trap case, many Mla and police officers trapped blackmailed of sex videos says victim harrassed by MLA. Munirathna has Blackmailed several higher police officers and MLA's she alleged.
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
10-06-25 12:44 pm
Bangalore Correspondent
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm