ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm