ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm