ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm