ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm