ಬ್ರೇಕಿಂಗ್ ನ್ಯೂಸ್
10-10-24 08:19 pm HK News Desk ಕರ್ನಾಟಕ
ಮೈಸೂರು, ಅ.10: ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಮೆಕ್ಯಾನಿಕ್ ಒಬ್ಬನಿಗೆ ಕೇರಳದ ಲಾಟರಿ ಹೊಡೆದಿದ್ದು ರಾತ್ರೋರಾತ್ರಿ ಸಾಮಾನ್ಯ ಮನುಷ್ಯ ಕೋಟ್ಯಾಧಿಪತಿ ಆಗಿದ್ದಾನೆ. ಕೇರಳ ಲಾಟರಿಯಲ್ಲಿ ಪಾಂಡವಪುರ ಮೂಲದ ಅಲ್ತಾಫ್ ಪಾಷಾ ಎಂಬ ಯುವಕ 25 ಕೋಟಿ ರೂ. ಬಹುಮಾನ ಗೆದ್ದಿದ್ದು ಎಲ್ಲರ ಗಮನಸೆಳೆದಿದೆ.
ವೃತ್ತಿಯಲ್ಲಿ ಬೈಕ್ ಮೆಕ್ಯಾನಿಕ್ ಆಗಿರುವ ಅಲ್ತಾಫ್, 15 ವರ್ಷಗಳಿಂದ ಲಾಟರಿ ಖರೀದಿಸುವ ಖಯಾಲಿ ಹೊಂದಿದ್ದ. ಇತ್ತೀಚೆಗೆ ಕೇರಳಕ್ಕೆ ಹೋಗಿದ್ದಾಗ ಓಣಂ ಬಂಪರ್ ಲಾಟರಿಯನ್ನು 500 ರೂ. ಕೊಟ್ಟು ಖರೀದಿ ಮಾಡಿದ್ದ. ಬಹುಮಾನ ಬಂದಿರುವ ವಿಚಾರವನ್ನು ಮೊದಲಿಗೆ ನಂಬುವುದಕ್ಕೂ ಅಲ್ತಾಫ್ ಕುಟುಂಬ ತಯಾರಿರಲಿಲ್ಲ. ಮಾಧ್ಯಮದ ಜೊತೆಗೆ ಅಲ್ತಾಫ್ ಪತ್ನಿ ಸೀಮಾ ಬಾನು ಮತ್ತು ಮಗಳು ತನಲ್ ಸಂತಸ ಹಂಚಿಕೊಂಡಿದ್ದಾರೆ.
ಮೊದಲಿಗೆ ನಾವು ಲಾಟರಿಯಲ್ಲಿ ಬಹುಮಾನ ಬಂದಿದೆ ಎಂದು ನಂಬಿರಲಿಲ್ಲ. ಇಂದು ಬೆಳಗ್ಗೆ ಪರಿಶೀಲನೆ ಬಳಿಕ ನಮಗೆ ನಂಬಿಕೆ ಬಂದಿತ್ತು. 15 ವರ್ಷದಿಂದ ಲಾಟರಿ ತೆಗೆದುಕೊಳ್ಳುತ್ತಿದ್ದರು. ಲಾಟರಿ ತೆಗೆದುಕೊಳ್ಳುವುದಕ್ಕೇ ಕೇರಳಕ್ಕೆ ಹೋಗುತ್ತಿದ್ದರು. 15 ವರ್ಷದಿಂದ ಯಾವುದೇ ಲಾಟರಿ ಗೆದ್ದಿರಲಿಲ್ಲ. ಈಗಲು ಅಷ್ಟೇ ನಮಗೆ ಬಂದಿಲ್ಲ ಅಂತನೇ ಅಂದುಕೊಂಡಿದ್ದೆವು. ಈ ಸಲ ಎರಡು ಲಾಟರಿ ಟಿಕೆಟ್ ತಂದಿದ್ದರು. ಒಂದನ್ನು ಯಾರಿಗಾದ್ರು ಕೊಟ್ಟುಬಿಡುತ್ತೇನೆ ಅಂದಿದ್ರು. ಆದ್ರೆ ಅದೇ ಗೆದ್ದುಬಿಟ್ಟರೆ ಅಂತ ಹೇಳಿದ್ದಕ್ಕೆ ಆ ಲಾಟರಿಯನ್ನೂ ಇಟ್ಟುಕೊಂಡಿದ್ದರು. ನೋಡಿದ್ರೆ ಅದೇ ಲಾಟರಿಗೆ 25 ಕೋಟಿ ಬಹುಮಾನ ಬಂದಿದೆ ಎಂದು ಸೀಮಾ ಬಾನು ಹೇಳಿದ್ದಾರೆ.
ಮೊದಲಿಗೆ ನಮಗೆ ನಂಬಿಕೆಯೆ ಇರಲಿಲ್ಲ. ಇಷ್ಟು ವರ್ಷ ಲಾಟರಿ ತೆಗೆದುಕೊಳ್ಳುವ ವಿಚಾರಕ್ಕೆ ಮನೆಯಲ್ಲಿ ಗಲಾಟೆಯೂ ಆಗಿತ್ತು. ಲಾಟರಿ ತೆಗೆದುಕೊಳ್ಳುವುದು ಬೇಡ ಅಂತ ಹೇಳುತ್ತಿದ್ದೆವು. ಇದೀಗ ಲಾಟರಿ ಗೆದ್ದಿರುವುದು ಖುಷಿಯಾಗಿದೆ. ಸ್ವಲ್ಪ ಸಾಲ ಇದೆ, ಅದನ್ನು ತೀರಿಸಿ ಮನೆ ತೆಗೆದುಕೊಳ್ಳಬೇಕೆಂಬ ಆಸೆ ಇದೆ ಎಂದು ಸೀಮಾ ಹೇಳಿದ್ದಾರೆ. ಅಲ್ತಾಫ್ ಲಾಟರಿ ಬಹುಮಾನ ಪಡೆಯುವುದಕ್ಕಾಗಿ ಕೇರಳಕ್ಕೆ ತೆರಳಿದ್ದಾರೆ. 25 ಕೋಟಿ ಮೊತ್ತದಲ್ಲಿ ತೆರಿಗೆ ಕಳೆದು 17.5 ಕೋಟಿ ಮೊತ್ತ ಅಲ್ತಾಫ್ ಕೈಸೇರಲಿದೆ.
Mandya youth gets bumper lottery of 25 crores, gets 12 crore after tax deduction. Altaf who had been to kerala had purchased two lotteries out of which he has been found the winner of 25 crores.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm