ಬ್ರೇಕಿಂಗ್ ನ್ಯೂಸ್
10-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿ ಆರೋಪ ಎದುರಿಸುತ್ತಿರುವ ಪವಿತ್ರಾ ನಾಗರಾಜ್ ಎಂಬ ಮಹಿಳೆ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಅಂಬೇಡ್ಕರ್ ಸೇನಾ ಸಂಘಟನೆಯ ನಾಯಕರನ್ನು ನಿಂದಿಸುತ್ತಿದ್ದು, ಇದನ್ನು ವಿರೋಧಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಕೆಯ ಪೋಸ್ಟರಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತನ್ನನ್ನು ಕಾಂಗ್ರೆಸ್ ನಾಯಕಿಯೆಂದು ಬಿಂಬಿಸಿಕೊಂಡಿದ್ದಲ್ಲದೆ, ಸರಕಾರಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪವಿತ್ರಾ ನಾಗರಾಜ್ ವಿರುದ್ಧ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸು ದಾಖಲಾಗಿತ್ತು. ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇವರಿಗೆ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಬೆಂಬಲಿಸಿದ್ದರು.





ಇದೀಗ ಪಿ. ಮೂರ್ತಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ತೇಜೋವಧೆ ಮಾಡುವ ರೀತಿ ಪವಿತ್ರಾ ನಾಗರಾಜ್ ನಿಗೂಢ ಜಾಗದಿಂದ ಫೇಸ್ಬುಕ್ ನಲ್ಲಿ ವಿಡಿಯೋ ಹಾಕುತ್ತಿದ್ದಾರೆ. ಇವರನ್ನು ಬಂಧಿಸಲು ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಬೆಂಗಳೂರು ಏರ್ಪೋರ್ಟ್ ರಸ್ತೆಯ ಸಿದ್ಲಘಟ್ಟ ಎಂಬಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಈಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Ambedkar sene protests against Sandhya Pavitra Nagaraj for deformative vidoes against P Murthy in Bangalore. Sandhya Pavitra Nagaraj who has been booked in honey trap case against Bhaskar Prasad has been making deformation videos against Ambedkar Sene State president P Murthy. Members held protest and slapped her banner with chappals.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm