ಬ್ರೇಕಿಂಗ್ ನ್ಯೂಸ್
11-10-24 03:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸುವಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಾಗಾಗಿ ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶೇ. 50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1 ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯವಾದದ್ದು. ಆ ದಿನ ಎಲ್ಲಾ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳು ಕೂಡ ಯಾರ ಮೇಲೂ ಒತ್ತಡ ಹೇರಬಾರದು. ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಿಸಲಿದ್ದಾರೆ ಎಂದಿದ್ದಾರೆ.
Karnataka Deputy Chief Minister DK Shivakumar on Friday announced that all institutions in the state, including IT companies, factories, and other establishments, should hoist the Kannada flag on November 1.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm