ಬ್ರೇಕಿಂಗ್ ನ್ಯೂಸ್
11-10-24 03:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸುವಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಾಗಾಗಿ ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶೇ. 50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1 ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯವಾದದ್ದು. ಆ ದಿನ ಎಲ್ಲಾ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳು ಕೂಡ ಯಾರ ಮೇಲೂ ಒತ್ತಡ ಹೇರಬಾರದು. ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಿಸಲಿದ್ದಾರೆ ಎಂದಿದ್ದಾರೆ.
Karnataka Deputy Chief Minister DK Shivakumar on Friday announced that all institutions in the state, including IT companies, factories, and other establishments, should hoist the Kannada flag on November 1.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm