ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm