ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm