ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.

ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm