ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.
ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm